ಸಂಪಾದಕೀಯ

ಆಮ್ ಆದ್ಮ ಪಾರ್ಟಿ ಯುವ ಘಟಕ – ಕರ್ನಾಟಕ. ಬೆಂಗಳೂರ.

ಆಮ್ ಆದ್ಮ ಪಾರ್ಟಿ ಯುವ ಘಟಕ – ಕರ್ನಾಟಕ

ಆಮ್ ಆದ್ಮಿ ಪಕ್ಷದ ಯುವ ವಿಭಾಗ – ಕರ್ನಾಟಕ

ಸರ್ಕಾರ ದಿಂದ ಸಹಾಯ ಪಡೆದ ಕಂಪೆನಿಗಳು ಸರ್ಕಾರಿ ಸ್ಕೂಲ್ ವಿದ್ಯಾರ್ಥಿಗಳಿಗೆ ಯಾಕೆ ಆದ್ಯತೆ ನೀಡಲ್ಲ – ಎಎಪಿ .ಲೊಹಿತ್
ಬೆಂಗಳೂರು. ನಮಗೇಕಿಲ್ಲ ಕ್ಯಾಂಪಸ್ ಸೆಲೆಕ್ಷನ್?: ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಧ್ವನಿಯಾಗಿ ಎಎಪಿ ಅಭಿಯಾನ ಮಾಡುತ್ತೀವೆಂದು ಇಂದು ಬೆಂಗಳೂರಿನ ಪ್ರೆಸ್ ಕ್ಲಬ್ ನಲ್ಲಿ ತಿಳಿಸಿದರು.
ಬಹುತೇಕ ಕಂಪನಿಗಳು ನಮ್ಮ ರಾಜ್ಯದಲ್ಲಿ ಪ್ರಾರಂಭ ಗೊಂಡಾಗ ಸರ್ಕಾರ ಎಲ್ಲಾ ಸವಲತ್ತುಗಳನ್ನು ನೀಡುತ್ತೆ ಉದ್ಯೋಗಕ್ಕಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಕ್ಯಾಂಪಸ್ ಸೆಲೆಕ್ಷನ್ ಗಾಗಿ ಪ್ರತಿಷ್ಠಿತ ಖಾಸಗಿ ಕಾಲೇಜುಗಳನ್ನೇ ಆಶ್ರಯಿಸುತ್ತಿರುವುದು ದುಃಖಕರ ವಿಚಾರವಾಗಿದೆ. ಸರ್ಕಾರಿ ಕಾಲೇಜುಗಳಲ್ಲಿ ಓದುವೆ ವಿದ್ಯಾರ್ಥಿಗಳೂ ಪ್ರತಿಭಾನ್ವಿತರಾಗಿದ್ದಾರೆ. ಒಂದೇ ವಿಷಯವನ್ನು ಅಭ್ಯಾಸ ಮಾಡಿರುತ್ತಾರೆ. ಕಲಿಕೆಯ ಗುಣಮಟ್ಟವೂ ಒಂದೇ ಆಗಿರುತ್ತದೆ. ಎಲ್ಲ ವಿಚಾರಗಳಲ್ಲಿ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಸರಿಸಮನಾಗಿದ್ದಾರೆ. ಆದರೂ ಕ್ಯಾಂಪಸ್ ಸೆಲೆಕ್ಷನ್ ಗೆ ಖಾಸಗಿ ಕಾಲೇಜು ವಿದ್ಯಾರ್ಥಿಗಳಿಗೆ ಕಂಪನಿಗಳು ಮಣೆಹಾಕುತ್ತಿರುವುದು ನೋವಿನ ಸಂಗತಿಯಾಗಿದೆ.

              ಕ್ಯಾಂಪಸ್ ಸೆಲೆಕ್ಷನ್ ಮಾಡುವ ಎಲ್ಲ ಕಂಪನಿಗಳು ಸರ್ಕಾರಿ ಕಾಲೇಜುಗಳನ್ನು ಪರಿಗಣಿಸಬೇಕು ಎಂಬುದು ಅಮ್ ಆತ್ಮ ಪಕ್ಷದ ಪ್ರಮುಖ ಒತ್ತಾಯವಾಗಿದೆ. ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕ್ಯಾಂಪಸ್ ಸೆಲೆಕ್ಷನ್ ಗೆ ಸಿದ್ಧಗೊಳಿಸುವುದು ಹಾಗೂ ಕಂಪನಿಗಳು ಖಾಸಗಿ ಕಾಲೇಜುಗಳಿಗೆ ನೀಡುವ ಮಾನ್ಯತೆಯಂತೆ ಸರ್ಕಾರಿ ಕಾಲೇಜುಗಳಿಗೂ ಸಮನಾಗಿ ಆದ್ಯತೆ ನೀಡುವಂತೆ ಆಯಾ ಜಿಲ್ಲಾಧಿಕಾರಿಗಳು ಜವಾಬ್ದಾರಿ ವಹಿಸಬೇಕು ಎಂದು ಪಕ್ಷ ಒತ್ತಾಯಿಸುತ್ತಿದೆ.

ಈ ನಿಟ್ಟಿನಲ್ಲಿ ಆಮ್ ಆದ್ಮ ಪಕ್ಷವು ರಾಜ್ಯಾದ್ಯಂತ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳ ಪರವಾಗಿ ಅಭಿಯಾನವನ್ನು ಹಮ್ಮಿಕೊಂಡಿದೆ.

   ಡಿಸೆಂಬರ್ 1ರಿಂದ 4ರವರೆಗೆ ಅಮ್ ಆದಿ ಪಕ್ಷದ ಯುವ ಘಟಕ ರಾಜ್ಯಾದ್ಯಂತ 4 ದಿನಗಳ ಅಭಿಯಾನವನ್ನು ಹಮ್ಮಿಕೊಂಡಿದೆ. ಪ್ರಮಖವಾಗಿ ಡಿ.1ರಂದು ರಾಮನಗರ, ಡಿ.2ರಂದು ಮಂಡ್ಯ, ಡಿ.3ರಂದು ಮೈಸೂರು ಹಾಗೂ ಡಿ.4ರಂದು ಚಾಮರಾಜನಗರದಲ್ಲಿ ಅಭಿಯಾನವನ್ನು ನಡೆಸಲಿದೆ. ಉಳಿದಂತೆ ರಾಜ್ಯದ ಎಲ್ಲಾ 31 ಜಿಲ್ಲೆಗಳಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಜಿಲ್ಲಾ ಮಟ್ಟದ ಅಭಿಯಾನಗಳನ್ನು ನಡೆಸಲಿದ್ದಾರೆ. ಈ ಮೂಲಕ ಜಿಲ್ಲಾಧಿಕಾರಿಗಳ ಗಮನವನ್ನು ಸೆಳೆದು, ಸರ್ಕಾರಿ ವಿದ್ಯಾರ್ಥಿಗಳನ್ನು ಕ್ಯಾಂಪಸ್ ಆಯ್ಕೆಗೆ ಪರಿಗಣಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳವಂತೆ ಒತ್ತಡ ಹೇರಲಾಗುವುದು ಎಂದು ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಜಿ. ಹನುಮಾಪುರ ಮಾಹಿತಿ ನೀಡಿದ್ದಾರೆ.           ವರದಿ. ಮಂಜುಳಾ ರೆಡ್ಡಿ.

Related Articles

Leave a Reply

Your email address will not be published. Required fields are marked *

Back to top button