ಸುದ್ಧಿ

ನಮ್ಮೊಂದಿಗಿಲ್ಲ ರತನ್ ನಾವಲ್ ಟಾಟಾ ಜೀ ಇನ್ನು ನೆನಪು ಮಾತ್ರ.

ನಮ್ಮೊಂದಿಗಿಲ್ಲ ರತನ್ ನಾವಲ್ ಟಾಟಾ ಜೀ ಇನ್ನು ನೆನಪು ಮಾತ್ರ.
ರತನ್ ನಾವಲ್ ಟಾಟಾ’ (೨೮, ಡಿಸೆಂಬರ್, ೧೯೩೭-)ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು

ರತನ್ ಟಾಟಾ, ಜೆ. ಆರ್. ಡಿ ರವರ ಅತ್ಯಂತ ನೆಚ್ಚಿನ ಶಿಷ್ಯ ; ಮತ್ತು ಅಜ್ಞಾರಾಧಕ. ಈಗಿನ ಪ್ರಸಕ್ತ, ಟಾಟಾಸನ್ಸ್, ಸಂಸ್ಥೆಯ ಛೇರ್ಮನ್ ಆಗಿರುವ, ರತನ್ ಟಾಟಾ, ಎಲ್ಲಾ ಟಾಟಾ ಸಂಸ್ಥೆಗಳ ವಿಭಾಗಗಳನ್ನೆಲ್ಲಾ ನೋಡಿಕೊಳ್ಳುತ್ತಿರುವ ಮಾತೃಸಂಸ್ಥೆಯಲ್ಲಿ ದುಡಿಯು ತ್ತಿದ್ದಾರೆ. ಇವರು, ಅನೇಕ ಪ್ರಮುಖ ಟಾಟಾ ಉದ್ಯಮಗಳಾದ, ಟಾಟಾ ಸ್ಟೀಲ್, ಟಾಟಾ ಮೋಟರ್ಸ್, ಟಾಟಾ ಪವರ್, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್, ಟಾಟಾ ಟೀ, ಟಾಟಾ ತಂತ್ರಜ್ಞಾನ, ಇಂಡಿಯನ್ ಹೋಟೆಲ್ಸ್ ಮತ್ತು ಟಾಟಾ ಟೆಲಿ ಸರ್ವಿಸಸ್ ಮುಂತಾದ ಶ್ರೇಷ್ಟ ವಿಭಾಗಗಳಲ್ಲಿ ಹೊಸದಾಗಿ ಅಳವಡಿಸಿದ ಅತ್ಯಾಧುನಿಕ ತಾಂತ್ರಿಕ ಮತ್ತು ಮುಂದಾಲೋಚನೆಯ ಕ್ರಮಗಳಿಂದಾಗಿ ಅವುಗಳ ಮಟ್ಟವನ್ನು ಉನ್ನತ ಶಿಖರಕ್ಕೇರಿಸಿ, ಕಂಪೆನಿಯ ಲಾಭಾಂಶವನ್ನು ಹೆಚ್ಚಿಸಿದರು.
ಟಾಟಾ ಉದ್ಯಮ ಪರಿವಾರ, ಯೂರೋಪಿನ, ಕೊರಸ್ ಸ್ಟೀಲ್, ಕಂಪೆನಿಯನ್ನು ತನ್ನ ಸ್ವಾಧೀನಕ್ಕೆ ತೆಗೆದುಕೊಳ್ಳುವುದರ ಮೂಲಕ, ಒಂದು ವಿಕ್ರಮವನ್ನೇ ಸ್ಥಾಪಿಸಿದೆ. ರತನ್ ಟಾಟಾ ರವರ ದೂರಾಲೋಚನೆ, ಮನೋಸ್ಥೈರ್ಯ, ಮುಂದಾಳುತ್ವ, ಹಾಗೂ ಸರಿಯಾದ ಸಮಯದಲ್ಲಿ ಸರಿಯಾಗಿ ತೆಗೆದುಕೊಳ್ಳುವ ತೀರ್ಮಾನಗಳಿಂದ, ಒಬ್ಬ ಅತ್ಯಂತ ಯಶಸ್ವಿ ಹಾಗೂ ಪರಿಣಾಮಕಾರಿಯಾದ ವ್ಯಕ್ತಿಯಾಗಿ ಪರಿಗಣಿಸಲ್ಪಟ್ಟಿದ್ದಾರೆ. ಟಾಟಾ ವಾಣಿಜ್ಯ ಪರಿವಾರ, ಈಗಾಗಲೇ ವಿಶ್ವದ ೫೦ ವಿದೇಶಿ ಸಂಸ್ಥೆಗಳಲ್ಲಿ, ತನ್ನ ಬಂಡವಾಳವನ್ನು ಹಾಕಿ ಯಶಸ್ವಿಯಾಗಿ ವಹಿವಾಟು ನಡೆಸುತ್ತಿದೆ. ಅವುಗಳಲ್ಲಿ ಮುಖ್ಯವಾದ ಕೆಲವು ಕಂಪೆನಿಗಳಲ್ಲಿ, ದಾವೂ ಟ್ರಕ್ಸ್, ಮತ್ತು ಟೆಟ್ಲಿ ಟೀ ಕೂಡ ಸೇರಿವೆ.
ಪರಿವಾರ ಹಾಗೂ ವಿದ್ಯಾಭ್ಯಾಸ
ರತನ್, ಶ್ರೀಮತಿ. ಸೂನಿ, ಹಾಗೂ, ‘ನಾವಲ್ ಹರ್ಮುಸ್ ಜಿ ಟಾಟಾ’, ರವರ ಹಿರಿಯ ಮಗನಾಗಿ, ಬೊಂಬಾಯಿನಲ್ಲಿ ಜನಿಸಿದರು. ಆದರೆ ದುರದೃಷ್ಟವಶಾತ್ ೧೯೪೦ ರಲ್ಲಿ ತಂದೆ-ತಾಯಿಗಳು ವಿವಾಹ ವಿಚ್ಛೇದನ ಮಾಡಿಕೊಂಡಿದ್ದರಿAದ, ಜೀವನದಲ್ಲಿ ಬಹಳ ನೋವನ್ನು ಅನುಭವಿಸಬೇಕಾಯಿತು. ಆಗ ಅವರ ವಯಸ್ಸು ೭ ವರ್ಷ. ಅವರ ತಮ್ಮ ಜಿಮ್ಮಿಗೆ ೫ ವರ್ಷ. ಈ ಅನಾಥಮಕ್ಕಳನ್ನು ಅವರ ಅಜ್ಜಿ, ನವಾಜ್ ಬಾಯಿ, ಸಾಕಿ- ಸಲಹಿದರು.
“ಜೆ” ಯವರು, ರತನ್ ರವರನ್ನು ಭಾರತಕ್ಕೆ ವಾಪಸ್ ಬರಲು ಕರೆದಾಗ, ರತನ್ ಅವರ ಅಜ್ಜಿ, ನವಾಜ್ ಬಾಯಿಯವರು, ಬೊಂಬಾಯಿನಲ್ಲಿ ತೀವ್ರವಾದ, ಕಾಯಿಲೆಯಿಂದ ನರಳುತ್ತಿದ್ದರು. ಅವರಿಗಾಗಿ ರತನ್ ಮತ್ತೆ ಭಾರತಕ್ಕೆ ಬರುವ ಮನಸ್ಸು ಮಾಡಿದರು. ರತನ್, ಕೆಥೆಡ್ರೆಲ್, ಜಾನ್ ಕೆನನ್ ಸ್ಕೂಲ್, ಬೊಂಬಾಯಿನಲ್ಲಿ ಪ್ರಾರಂಭದ ಓದು. ಕಾಲೇಜ್ ನ ದಿನಗಳಲ್ಲಿ, ಸಿಗ್ಮ ಫಿ ಫ್ರೆಟರ್ನಿಟಿ, ಯಲ್ಲಿ ವಾಸ.
೧೯೬೨ ರಲ್ಲಿ ಕಾರ್ನೆಲ್ ನಲ್ಲಿ ಪದವಿ ಪಡೆದರು. ಕನ್ ಸ್ಟ್ರಕ್ ಷನ್ , ಹಾಗೂ ಸ್ಟ್ರಕ್ಚರಲ್ ಎಂಜಿನಿಯರಿAಗ್ ನಲ್ಲಿ ವಿಶೇಷ ಜ್ಞಾನಾರ್ಜನೆ. ಐ. ಬಿ. ಎಮ್, ನಲ್ಲಿ ಅವರಿಗೆ ಕರೆಬಂದಿತ್ತು. ಆ ಸಮಯಕ್ಕೆ, ಜೆ ಅವರು ರತನ್ ಗೆ ಪತ್ರಬರೆದು ಭಾರತಕ್ಕೆ ಕರೆಸಿಕೊಂಡರು.
ರತನ್ ಟಾಟಾ, ಒಳ್ಳೆಯ ಮುಂದಾಳು, ಹಾಗೂ ಸಂಘಟಕ
ಇದುವರೆಗಿನ ಕಾರ್ಯನಿರ್ವಹಿಸಿದ, ಬೃಹತ್ ಟಾಟಾ ಉದ್ಯಮದ ನಿರ್ದೇಶಕರಲ್ಲಿ, ರತನ್ ಒಬ್ಬರೇ ಅತ್ಯಂತ ಹೆಚ್ಚು ಓದಿಕೊಂಡಿರುವವರು. ಜೆ. ಆರ್. ಡಿ ಯವರು ತಮಗೆ ಕಾಲೇಜ್ ಶಿಕ್ಷಣ ದೊರೆಯದಿದ್ದಕ್ಕಾಗಿ, ಕ್ಲೇಶಗೊಂಡು, ತಮ್ಮ ಜೀವನದುದ್ದಕ್ಕೂ ಕಳವಳವನ್ನು ವ್ಯಕ್ತಪಡಿಸುತ್ತಲೇ ಇದ್ದರು. ರತನ್ ಅಮೆರಿಕದ ಕಾರ್ನೆಲ್ ವಿಶ್ವವಿದ್ಯಾಲಯದಲ್ಲಿ, ಬಿ.ಎಸ್ಸಿ ಆರ್ಕಿಟೆಕ್ಚರ್, ವಿಷಯವನ್ನು ತೆಗೆದುಕೊಂಡು, ೧೯೬೨ ರಲ್ಲಿ ಪಾಸ್ ಮಾಡಿದರು.
ಆಮೇಲೆ, ಭಾರತಕ್ಕೆ ವಾಪಸ್ಸಾಗುವ ಮೊದಲು, ‘ಮೆಸರ್ಸ್. ಜೋನ್ಸ್ ಅಂಡ್ ಎಮ್ಮನ್ಸ್, ಕಂ’, ಲಾಸ್ ಎಂಜಲೀಸ್, ಕ್ಯಾಲಿಫೋರ್ನಿಯದಲ್ಲಿ ಸ್ವಲ್ಪಕಾಲ ಕೆಲಸ ಮಾಡಿದರು. ಭಾರತಕ್ಕೆ ಬಂದ ಕೂಡಲೇ ಟಾಟಾ ಪಂಗಡದ, ಹಲವಾರು ಪ್ರತಿಶ್ಠಿತ ಸಂಸ್ಥೆಗಳಲ್ಲಿ ಕೆಲಸ ಮಾಡಿ, ಕೊನೆಯಲ್ಲಿ, ‘ಎನ್. ಇ.ಎಲ್ ಕಂಪೆನಿ’ಯ, ಇನ್-ಛಾರ್ಜ್ ಮತ್ತು ಛೇರ್ಮನ್ ಆಗಿ, ಸೇರಿಕೊಂಡರು. ೧೯೮೧ ರಲ್ಲಿ, ಹೈಟೆಕ್ ವಿಭಾಗದಲ್ಲಿ ಹಲವಾರು ಹೊಸ -ಹೊಸ, ತಂತ್ರಜ್ಞಾನಗಳಿಗೆ ನಾಂದಿಹಾಕಿ, ಅವನ್ನು ಬೆಳೆಸಿದರು.

Related Articles

Leave a Reply

Your email address will not be published. Required fields are marked *

Back to top button