ಶ್ರದ್ಧಾ ಭಕ್ತಿಯಿಂದ ಛತ್ರಪತಿ ಶಿವಾಜಿ ಜಯಂತಿ ಆಚರಣೆ.ಗಂಗಾವತಿ.

ಕನಕಗಿರಿಯಲ್ಲಿ ವಿವಿಧಡೆ ಶ್ರದ್ಧಾ ಭಕ್ತಿಯಿಂದ ಛತ್ರಪತಿ ಶಿವಾಜಿ ಜಯಂತಿಯನ್ನು ಆಚರಿಸಲಾಯಿತು*
ಕೊಪ್ಪಳ ಜಿಲ್ಲ ಕಛೇರಿ ಮತ್ತು ಎಲ್ಲಾ ತಾಲೂಕಿನ ತಾಲೂಕ ತಹಶೀಲ್ದಾರ್ ಕಚೇರಿಗಳಲ್ಲಿ ತಾಲೂಕ್ ಕಚೇರಿ ಪಟ್ಟಣ ಪಂಚಾಯಿತಿ ಪುರಸಭೆಗಳಲ್ಲಿ ಹಾಗೂ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಭಾವಚಿತ್ರವನ್ನಿಟ್ಟು ಸಾಮ್ರಾಟ್ ಛತ್ರಪತಿ ಶಿವಾಜಿ ಜಯಂತಿಯನ್ನು ವಿಧಿಪೂರಕವಾಗಿ ಭಕ್ತಿಯಿಂದ ಆಚರಿಸಲಾಯಿತು.
ಹಾಗೂ ಛತ್ರಪತಿ ಶಿವಾಜಿ ಜಯಂತಿಯನ್ನು ಆಚರಿಸಲು ಹಿಂದೂಪರ ಸಂಘಟನೆಗಳು ಮತ್ತು ಅನೇಕ ಸ್ಥಳಗಳಲ್ಲಿ ಆಚರಿಸಲಾಯಿತು . ಶ್ರದ್ಧ ಪೂರ್ವಕವಾಗಿ ಹಿಂದೂ ಸಾಮ್ರಾಟ್ ಚಕ್ರವರ್ತಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಪೂಜಾ ಕಾರ್ಯಕ್ರಮಗಳು ಮಾಡುವ ಮೂಲಕ ಜಯಂತಿಯನ್ನು ಆಚರಿಸಲಾಯಿತು .
ಅವರ ಸಾಧನೆಗಳು ಅನೇಕ ರಾಷ್ಟ್ರ ಪ್ರೇಮಿಗಳಗೆ ಅವರ ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಟವನ್ನು ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿ ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು. ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ ಮತ್ತು ದೇಶ ಮತ್ತು ರಾಷ್ಟ್ರ ಪ್ರೇಮಗಳಿಗೆ ಸ್ಫೂರ್ತಿ ದಾಯಕರಗಿದ್ದರೆ.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



