ಜಿಲ್ಲಾ ಉಸ್ತುವಾರಿ ಸಚಿವರಿಂದ ನರೇಗಾವಾಣಿ ಮಾಸಿಕ ಪತ್ರಿಕೆ ಬಿಡುಗಡೆ

ಜಿಲ್ಲಾ ಉಸ್ತುವಾರಿ ಸಚಿವರಿಂದ ನರೇಗಾವಾಣಿ ಮಾಸಿಕ ಪತ್ರಿಕೆ ಬಿಡುಗಡೆ
ಕನಕಗಿರಿ: ತಾ.ಪಂ ನಿಂದ ವಿನೂತನವಾಗಿ ನರೇಗಾ ಯೋಜನೆಯ ಕುರಿತು ಹೊರತಂದಿರುವ ನರೇಗಾವಾಣಿ ಪತ್ರಿಕೆಯು ತುಂಬಾ ಚೆನ್ನಾಗಿದ್ದು, ಪತ್ರಿಕೆಯ ಮೂಲಕ ಯೋಜನೆಯ ಬಗ್ಗೆ ಹೆಚ್ಚು ಹೆಚ್ಚು ಜನರಿಗೆ ಜಾಗೃತಿ ಮೂಡಿಸಿ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ್ ತಂಗಡಗಿ ಅವರು ಹೇಳಿದರು.
ಪಟ್ಟಣದಲ್ಲಿ ಕನಕಗಿರಿ ಉತ್ಸವದ ಹಿನ್ನೆಲೆಯಲ್ಲಿ ತೆರೆಯಲಾಗಿರುವ ವಸ್ತುಪ್ರದರ್ಶನ ಮಳಿಗೆಯಲ್ಲಿ ನರೇಗಾ ಮಾಹಿತಿ ಕೇಂದ್ರವನ್ನು ಉದ್ಘಾಟಿಸಿ, ಬಳಿಕ ನರೇಗಾವಾಣಿ ಮಾಸಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ನರೇಗಾ ಯೋಜನೆಯು ಪ್ರಾರಂಭವಾಗಿ 18 ವರ್ಷಗಳು ಕಳೆದಿವೆ. ಸಾಕಷ್ಟು ಜನರು ಯೋಜನೆಯ ಪ್ರಯೋಜನ ಪಡೆದಿದ್ದು, ಗ್ರಾಮೀಣ ಜನರ ಜೀವನೋಪಾಯಕ್ಕಾಗಿ ಹಾಗೂ ಸ್ವಾವಲಂಬಿ ಬದುಕನ್ನು ರೂಪಿಸುವಲ್ಲಿ ಯೋಜನೆ ಸಹಕಾರಿಯಾಗಿದೆ ಎಂದರು.
ಬಳಿಕ ಉತ್ಸವಕ್ಕೆ ಆಗಮಿಸಿದ ಸಾಕಷ್ಟು ಜನರು ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ ಯೋಜನೆಯಡಿ ಸಿಗುವ ವೈಯಕ್ತಿಕ ಹಾಗೂ ಸಮುದಾಯ ಕಾಮಗಾರಿಯ ಕುರಿತು ಮಾಹಿತಿಯನ್ನು ಪಡೆದುಕೊಂಡರು.
ನಂತರ ಜಿ.ಪಂ ಸಿಇಓ ರಾಹುಲ್ ರತ್ನಂ ಪಾಂಡೇ ಅವರು ನರೇಗಾ ಸ್ಟಾಲ್ ಗೆ ಭೇಟಿ ನೀಡಿ ಪತ್ರಿಕೆಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಸಹಾಯಕ ಕಾರ್ಯದರ್ಶಿ ಶಿವಪ್ಪ ಸುಭೇದಾರ್, ತಾ.ಪಂ ಇಓ ಚಂದ್ರಶೇಖರ್ ಬಿ ಕಂದಕೂರ್, ಜನಪ್ರತಿನಿಧಿಗಳಾದ ರಮೇಶ ನಾಯಕ, ಅಮರೇಶ ಗೋನಾಳ, ಜಿಲ್ಲಾ ಐಇಸಿ ಸಂಯೋಜಕ ಶ್ರೀನಿವಾಸ್ ಚಿತ್ರಗಾರ್, ಜಿಲ್ಲಾ ಐಇಸಿ ಸಮಾಲೋಚಕ ಮಾರುತಿ, ತಾಂತ್ರಿಕ ಸಂಯೋಜಕ ಸಯ್ಯದ್ ತನ್ವೀರ್, ಐಇಸಿ ಸಂಯೋಜಕ ಶಿವಕುಮಾರ್ ಕೆ, ಎಂಐಇಸ್ ಸಂಯೋಜಕ ಮೇಘರಾಜ ಸೇರಿದಂತೆ ಬಿಎಫ್.ಟಿಗಳು, ಗ್ರಾಮ ಕಾಯಕ ಮಿತ್ರರು ಹಾಜರಿದ್ದರು.
ಗೌತಮ್ ಯಾದವ್ ಪ್ರಜಾ ಶ್ರೀ ಪತ್ರಿಕೆ ಕೊಪ್ಪಳ ಜಿಲ್ಲಾ ವರದಿಗಾರ



